ಆರೋಗ್ಯ ,ನೈರ್ಮಲ್ಯ, ನೀರಿನ ಬಳಕೆ ಕುರಿತು ಅರಿವು ಮೂಡಿಸುವ ಬೀದಿನಾಟಕ ಪ್ರದರ್ಶನ

Spread the love

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ವತಿಯಿಂದ ಆರೋಗ್ಯ ,ನೈರ್ಮಲ್ಯ, ನೀರಿನ ಸಂರಕ್ಷಣೆ ಕುರಿತಂತೆ ನಗರದ ಲಕ್ಷ್ಮಿ ದೇವಾಲಯ ಆವರಣದಲ್ಲಿ ಬೀದಿ ನಾಟಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

 

ಕಾರ್ಯಕ್ರಮವನ್ನು ತಾಲ್ಲೂಕಿನ ಯೋಜನಾಧಿಕಾರಿಗಳಾದ ದಿನೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನುಉದ್ಘಾಟನೆ ಮಾಡಿದರು.

 

ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಯೂಟ್ಯೂಬ್ ಚಾನೆಲ್ , ಆರೋಗ್ಯ ಹಾಗೂ ನೈರ್ಮಲ್ಯ, ನೀರು ಉಳಿಸಿ ಕಾರ್ಯಕ್ರಮದ ಬಗ್ಗೆ, ಪರಿಸರ ಸಂರಕ್ಷಣೆ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಬಗ್ಗೆ ಬೀದಿ ನಾಟಕದ ಮೂಲಕ ಸದಸ್ಯರಿಗೆ ಅರಿವನ್ನು ಮೂಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಗೀತಾ ,ವಲಯ ಮೇಲ್ವಿಚಾರಕರಾದ ಶಶಿಕಲಾ ಸಮನ್ವಯಾಧಿಕಾರಿ ಛಾಯಾ ಹಾಗೂ ಸೇವಾಪ್ರತಿನಿಧಿಯಾದ ಗಂಗಮ್ಮ, ನಂದಿನಿ ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.