ಕಾರ್ಮಿಕ ಇಲಾಖೆ ವತಿಯಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Spread the love

ಕಾರ್ಮಿಕ ಇಲಾಖೆ ವತಿಯಿಂದ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 2025-26 ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿಯನ್ನು www.klwbapps.karnataka.gov.in ವೆಬ್ಸೈಟ್ ಮೂಲಕ ಡಿಸೆಂಬರ್ 31 ರೊಳಗೆ ಸಲ್ಲಿಸಬೇಕು.

 

ಕಾರ್ಮಿಕನ ಮಾಸಿಕ ವೇತನ 35,000 ಮೀರಿರಬಾರದು, ವಿದ್ಯಾರ್ಥಿಯ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಹಾಗೂ ಪ.ಜಾತಿ/ಪ.ಪಂ ಶೇ 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು,ಕುಟುಂಬದ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು,

 

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48. 2ನೇ ಮಹಡಿ, ಮತ್ತಿಕೆರೆ ಮುಖ್ಯ ರಸ್ತೆ, ಯಶವಂತಪುರ, ಬೆಂಗಳೂರು -560022 ಖುದ್ದಾಗಿ ಅಥವಾ ದೂರವಾಣಿ ಸಂ: 080-23475188, 8277291175, 8277120505, 9141585402 ಹಾಗೂ 9141602561 ಗೆ ಸಂಪರ್ಕಿಸಬಹುದು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.