ಅಧಿಕಾರ ದುರುಪಯೋಗ ಆರೋಪ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ವಿರುದ್ಧ ಪ್ರತಿಭಟನೆಗೆ ಮುಂದಾದ ಸದಸ್ಯರು

Spread the love

ದೊಡ್ಡಬಳ್ಳಾಪುರ : ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ದೊಡ್ಡಬಳ್ಳಾಪುರ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ನಗರಸಭೆಯ ಸದಸ್ಯರು ನಗರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನೆಡೆಸಿದರು.

ದಲಿತ ಸದಸ್ಯರು ಮತ್ತು ಕಾಂಗ್ರೆಸ್ ಸದಸ್ಯರ ವಾರ್ಡ್ ಗಳ ಅಭಿವೃದ್ಧಿಗೆ ಪ್ರಸ್ತುತ ಸ್ಥಾಯಿ ಸಮಿತಿ ಅಧ್ಯಕ್ಷರು ಇಲ್ಲ ಸಲ್ಲದ ಕಾರಣ ಹೇಳಿ ಅಡ್ಡಿ ಪಡಿಸುತ್ತಿದ್ದಾರೆ, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ಜನ ಪ್ರತಿನಿದಿಗಳಾದ ನಮ್ಮ ಆದ್ಯಾ ಕರ್ತವ್ಯವಾಗಿದೆ ಆದರೆ ಸ್ಥಾಯಿ ಸಮಿತಿ ಅಧ್ಯಕ್ಷರು ನಗರದ ಎಲ್ಲಾ ವಾರ್ಡ್ ಗಳ ಅಭಿವೃದ್ಧಿ ಕಾರ್ಯಗಳಲ್ಲಿ ನುಸೂಳಿ ಅಡ್ಡಿ ಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಮಂಜುನಾಥ್ ಆರೋಪಿಸಿದ್ದಾರೆ.

 

ನಗರದ ಕಚೇರಿ ಪಾಳ್ಯದಲ್ಲಿ ಒಳಚರಂಡಿ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಸಂಪರ್ಕ ಮಾರ್ಗ ಕಲ್ಪಿಸಲು ಮುಂದಾಗಿದ್ದು, ಸ್ಥಾಯಿ ಸಮಿತಿ ಅಧ್ಯಕ್ಷರು ನನ್ನ ಅಪ್ಪಣೆ ಪಡೆಯಬೇಕು ಎಂದು ಹೇಳುತ್ತಾರೆ ಇವರ ಅಪ್ಪಣೆ ಪಡೆಯಲು ಇವರೇನು ಸರ್ವಧಿಕಾರಿಯೇ… ನಮ್ಮ ವಾರ್ಡ್ ನ ಜನತೆಗೆ ಸೌಲಭ್ಯ ಕಲ್ಪಿಸುವುದು ಜನಪ್ರತಿನಿದಿಗಳ ಕರ್ತವ್ಯ ಅಲ್ಲವೇ ಇದಕ್ಕೆ ಅಡ್ಡಿ ಪಡಿಸುತ್ತಿರುವ ಸ್ಥಾಯಿ ಸಮಿತಿ ಅಧ್ಯಕ್ಷರ ವಿರುದ್ಧ ಪೌರಯುಕ್ತರು ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಅಗ್ರಹಿಸಿದರು.

ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯರಾದ ಆನಂದ್, ಚಂದ್ರ ಮೋಹನ್, ಮುಖಂಡರಾದ ಸುಬ್ರಮಣಿ ಸೇರಿದಂತೆ ಹಲವರು ಹಾಜರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.