ಯುವ ನಟ ಸಂತೋಷ್ ಬಾಲರಾಜ್ (34) ನಿಧನ

Spread the love

ಸ್ಯಾಂಡಲ್‌ವುಡ್‌ನ ಗಣಪ, ಕರಿಯ 2 ಖ್ಯಾತಿಯ ಯುವ ನಟ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ.

ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.

 

ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದರು ಗಂಭೀರ ಸ್ಥಿತಿಯಲ್ಲಿ ತಲುಪ್ಪಿದ್ದ ಅವರು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆ. 5ರಂದು (ಇಂದು)ಚಿಕೆತ್ಸೆ ಫಲಕಾರಿಯಾಗದೇ ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.

 

 

Leave a Reply

Your email address will not be published. Required fields are marked *

© 2026 Malnad TV. All Rights Reserved.