ದಾಸಗೊಂಡನಹಳ್ಳಿ : ರಸ್ತೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ : ಅಕ್ರಮವಾಗಿ ನಿರ್ಮಾಣ ಮಾಡಿರುವ ಶೆಡ್ ತೆರವು ಮಾಡುವಂತೆ ಗ್ರಾಮಸ್ಥರ ಅಗ್ರಹ

ಜಿಲ್ಲೆ ತಾಲೂಕು
Spread the love

ದೊಡ್ಡಬಳ್ಳಾಪುರ : ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದ್ದು, ಶೆಡ್ ನಿಂದ ಗ್ರಾಮಸ್ಥರ ದಿನನಿತ್ಯ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ದಾಸಗೊಂಡನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದು ಶೆಡ್ ಅನ್ನು ಕೂಡಲೇ ತೆರವು ಮಾಡುವಂತೆ ತಾಲ್ಲೂಕು ಹಾಗೂ ಸ್ಥಳೀಯ ಪಂಚಾಯತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

ದೊಡ್ಡಬಳ್ಳಾಪುರ ತಾಲೂಕು ಕಸಬಾ ಹೋಬಳಿ ರಾಜಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸಗೊಂಡನಹಳ್ಳಿ ರಸ್ತೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ. ದಾಸಗೊಂಡನಹಳ್ಳಿ ವೃತ್ತದಿಂದ ನಾರಾಯಣಸ್ವಾಮಿ ಮನೆಯವರೆಗೂ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದೆ. ಮನೆಯ ಮುಂಭಾಗದ ರಸ್ತೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 

ಈ ರಸ್ತೆಯು ಗ್ರಾಮದ ರೂಡಿಗತ ರಸ್ತೆಯಾಗಿದ್ದು ಈ ರಸ್ತೆ ಮುಂದುವರೆದು ಗ್ರಾಮದ ಕೆರೆಗೆ ಸಂಪರ್ಕಿಸುತ್ತದೆ, ಗ್ರಾಮದಲ್ಲಿ ಗೋಮಾಳ ಇಲ್ಲದೆ ಇರುವುದರಿಂದ, ಜಾನುವಾರುಗಳನ್ನು ಮೇಯಿಸಲು ಇದೇ ರಸ್ತೆಯನ್ನ ಬಹಳ ವರ್ಷದಿಂದ ಬಳಸಲಾಗುತ್ತಿದೆ, ಇರುವ ಕಾಲುದಾರಿಯನ್ನ ರಸ್ತೆಯನ್ನಾಗಿ ಮಾಡುವಂತೆಯು ಗ್ರಾಮಸ್ಥರು ಮನವಿ ಮಾಡಿದ್ದೇವೆ ಎನ್ನುತ್ತಾರೆ ಸ್ಥಳೀಯರು.

 

ಅಕ್ರಮವಾಗಿ ನಿರ್ಮಾಣ ಮಾಡಿರುವ ಶೆಡ್ ತೆರವು ಮಾಡುವಂತೆ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು, ಇಲ್ಲಿಯವರೆಗೂ ಶೆಡ್ ತೆರವು ಕಾರ್ಯ ಮಾಡಿಲ್ಲ ಎಂದು ಗ್ರಾಮಸ್ಥರು ಅಸಮಾಧನ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *