ಗೌರಿ ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದಲ್ಲೂ ಕೂಡ ಡಿಜೆ ಬಳಕೆ ನಿಷೇಧ ಮಾಡಿದ್ದು ಯಾರಾದರೂ ಕಾನೂನು ಉಲ್ಲಂಘನೆ ಮಾಡಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಸಾಧಿಕ್ ಪಾಷಾ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು ಈ ಹಿಂದೆ ಗೌರಿ ಗಣೇಶ ಹಬ್ಬದಲ್ಲಿ ರಾಜ್ಯ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ತಾಲೂಕಿನಾದ್ಯಂತ ಡಿಜೆ ನಿಷೇಧಿಸಿ ಬಳಕೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು ಅಂತೆಯೇ ನಾಳೆ ಸೆಪ್ಟೆಂಬರ್ 5ರಂದು ನಡೆಯಲಿರುವ ಈದ್ ಮಿಲಾದ್ ಹಬ್ಬದಲ್ಲಿಯೂ ಡಿ ಜೆ ನಿಷೇಧ ಮಾಡಲಾಗಿದೆ. ಮುಸ್ಲಿಂ ಬಾಂಧವರು ಕಾನೂನು ಉಲ್ಲಂಘನೆ ಮಾಡದೆ ,ಡಿಜೆ ಬಳಸದೆ ಶಾಂತ ರೀತಿಯಲ್ಲಿ ಹಬ್ಬ ಆಚರಣೆ ಮಾಡಬೇಕೆಂದು ಮನವಿ ಮಾಡಿದ್ದಾರೆ
