K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷರಾಗಿ ಬಿ.ಶಿವಶಂಕರ್ ಆಯ್ಕೆ

Spread the love

K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷರಾಗಿ ಬಿ.ಶಿವ ಶಂಕರ್ ರವರನ್ನು ನೇಮಕ ಮಾಡಲಾಗಿದೆ.

 

ಈ ಕುರಿತು ಮಾತನಾಡಿರುವ ಅವರು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಸದಾ ಜೀವಂತ ಲಂಚಮುಕ್ತ ಸಮಾಜ ನಿರ್ಮಿಸಲು ನಮ್ಮ ಸಮಿತಿ ಪ್ರಾಮಾಣಿಕವಾಗಿ ಶ್ರಮಿಸಲಿದೆ ಎಂದರು.

ಕರ್ನಾಟಕ ರಾಜ್ಯ ಸರ್ವ ಶಕ್ತಿ ಸಮಿತಿಯು ನನ್ನ ಮೇಲೆ ನಂಬಿಕೆ ಹಾಗೂ ವಿಶ್ವಾಸದಿಂದ ಹೊಸ ಜವಾಬ್ದಾರಿ ನೀಡಿದ್ದು, ರಾಜ್ಯದ ಪ್ರತಿ ಗ್ರಾಮ ಮಟ್ಟದಿಂದ ಸಮಿತಿ ಬಲಪಡಿಸಲು ಯೋಜನೆ ರೂಪಿಸಲಾಗುವುದು ಭ್ರಷ್ಟಾಚಾರ ಮುಕ್ತ ಸಮಾಜದ ತತ್ವ ಸಿದ್ಧಾಂತಗಳನ್ನು ಹೊತ್ತು ರಾಜ್ಯದ 31 ಜಿಲ್ಲೆಗಳಲ್ಲಿ ಸಮಿತಿಯ ನೂತನ ಸದಸ್ಯರ ತಂಡ ಕಟ್ಟಲಾಗುವುದು ಎಂದರು.

ನೂತನ ಗೌರವ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಶಿವಶಂಕರ್ ರವರಿಗೆ K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಹಿತೈಷಿ ಗಳು ಅಭಿನಂದನೆ ಸಲ್ಲಿಸಿದ್ದಾರೆ.

 

 

Leave a Reply

Your email address will not be published. Required fields are marked *

© 2026 Malnad TV. All Rights Reserved.