ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 25ಹಾಗೂ 26ಕ್ಕೆ ಮುಂದೂಡಿಕೆ

ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆ: ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ದೊಡ್ಡಬಳ್ಳಾಪುರ: ಜನವರಿ ತಿಂಗಳ 21/22 ರಂದು ನಡೆಯಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.   ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ : 25.02024 ಭಾನುವಾರ ಮತ್ತು 26.02.2024 ರಂದು ಸೋಮವಾರ ನಡೆಯಲಿದೆ.   ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜನವರಿ 21 ಮತ್ತು 22 ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನಪರಿಷತ್ತು […]

Continue Reading

ಕುವೆಂಪುರವರ ಸಾಹಿತ್ಯ ಬರಹಗಳನ್ನು ಓದುವುದರ ಜೊತೆಗೆ ಅವರ ಚಿಂತನೆಗಳನ್ನು ವಿಧ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು – ಜಿ.ಟಿ.ನರೇಂದ್ರಕುಮಾರ್

ದೊಡ್ಡಬಳ್ಳಾಪುರ : ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ. ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ ಬರಹಗಳು […]

Continue Reading

ವಕೀಲರ ದಿನಾಚಣೆಯೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆ : ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ : ನ್ಯಾಯಾಲಯಗಳಲ್ಲಿ ಮಾತೃಭಾಷೆ ಕನ್ನಡಭಾಷೆಯಲ್ಲಿ ವಾದ ಮಂಡನೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು. ದೊಡ್ಡಬಳ್ಳಾಪುರ ನಗರದ ಕೋರ್ಟ್ ಆವರಣದಲ್ಲಿ ತಾಲೂಕು ವಕೀಲರ‌ ಸಂಘದ ವತಿಯಿಂದ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಹಾಗೂ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ ಎಲ್ […]

Continue Reading

13ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ನೂತನ ಲೋಗೋ ಲೋಕಾರ್ಪಣೆ ಮಾಡಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : 2024 ರ ಜನವರಿ 21 ಹಾಗೂ 22 ರಂದು ತಾಲ್ಲೂಕಿನ ಭಾಶೇಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಡಶಾಲೆಯಲ್ಲಿ 13 ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜು ಘೋಷಿಸಿದರು ಈ ಸಮ್ಮೇಳನದ ಅಧ್ಯಕ್ಷತೆಯನ್ನು ಡಾ . ಅಂಜಿನಪ್ಪ ವಹಿಸಿದ್ದಾರೆ ಎಂದು ತಿಳಿಸಿದರು   ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಲಾಂಛನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಮ್ಮುಖದಲ್ಲಿ ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜು […]

Continue Reading